Girish Karnad
Nagamandala
Cover
Unabridged
1 hour 47 minutes
Some articles contain affiliate links (marked with an asterisk *). If you click on these links and purchase products, we will receive a small commission at no extra cost to you. Your support helps to keep this site running and to continue creating useful content. Thank you for your support!
'ನಾಗಮಂಡಲ' ನಾಟಕವು ಜಾನಪದ ಕತೆಯನ್ನು ಆಧರಿಸಿ ರಚಿಸಿದ ನಾಟಕ. 'ನಾಗಮಂಡಲ'ದ ನಾಯಕಿ ರಾಣಿ. ಅವಳ ಪತಿ ಅಪ್ಪಣ್ಣ. ಪತಿಯನ್ನು ಒಲಿಸಿಕೊಳ್ಳಲು ಬೇರಿನ ಸಾರು ತಯಾರಿಸುವ ರಾಣಿ ಅದು ಒಡೆದು ಹಾಳಾದದ್ದನ್ನು ನೋಡಿ ಸಮೀಪದ ಹುತ್ತಕ್ಕೆ ಸುರಿಯುತ್ತಾಳೆ. ಅಲ್ಲಿನ ನಾಗ ಅವಳ ಮೇಲೆ ಮನಸೋತು ಪತಿಯ ವೇಷದಲ್ಲಿ ಮನೆಯೊಳಗೆ ಬಂದು ರಾಣಿಯೊಡನೆ ಸರಸ-ಸಲ್ಲಾಪ ನಡೆಸುತ್ತಾನೆ. ಅವಳು ಗರ್ಭಿಣಿಯಾದದ್ದನ್ನು ಕೇಳಿ ಕೋಪಗೊಳ್ಳುವ ಪತಿ ತನ್ನ ಹೆಂಡತಿಯ ಮೇಲೆ ಆರೋಪ ಹೊರಿಸುತ್ತಾನೆ. ನಾಗದಿವ್ಯದ ಮೂಲಕ ಸತ್ಯ ಸಾರುವ ರಾಣಿ ಜನಮನ್ನಣೆಗೆ ಪಾತ್ರಳಾಗುತ್ತಾಳೆ. ಈ ನಾಟಕವನ್ನು ನಟ ಶಂಕರನಾಗ್ ಮೊದಲ ಬಾರಿಗೆ ರಂಗದ ಮೇಲೆ ತಂದಿದ್ದರು. ಟಿ.ಎಸ್. ನಾಗಾಭರಣ ಈ ನಾಟಕದ ಕತೆ ಆಧರಿಸಿ ಚಿತ್ರ ನಿರ್ದೇಶಿಸಿದ್ದರು. ರಂಗ-ತೆರೆಯ ಮೇಲೆ ಮಿಂಚಿದ 'ನಾಗಮಂಡಲ' ಕನ್ನಡದ ವಿಭಿನ್ನ ಪ್ರಯೋಗಗಳಲ್ಲಿ ಒಂದು.
Lismio